8:20 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್

03/12/2024, 14:39

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯ ನೆಹರು ಯುವಕ ಕೇಂದ್ರದ ಆಶ್ರಯದಲ್ಲಿ ಜಪ್ಪಿನಮೊಗರು ದಕ್ಷಿಣ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಸಭಾಭವನದಲ್ಲಿ ಇತ್ತೀಜಿಗೆ ನಡೆದ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಜನಜಾಗೃತಿ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ತಾಲೂಕು ವೈದ್ಯಾಧಿಕಾರಿ ಡಾ.|ಸುಜಯ ಭಂಡಾರಿ ಅವರು ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಿಯು ತನ್ನ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಕಡಿಸುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಾನೆ ಎಂದು ನುಡಿದರು.


ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವೈದ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ವಹಿಸಿದ್ದರು. ನೆಹರು ಯುವಕ ಕೇಂದ್ರದ ಅಧಿಕಾರಿ ಜಗದೀಶ್ ಪ್ರಸ್ತಾವನೆ ಗೈದರು.


ಅತಿಥಿಗಳಾಗಿ ಸುಧಾಕರ್. ಜೆ, ದೀಪಕ್ ಸುವರ್ಣ, ಎಂ, ದಿವಾಕರ್, ಮುರಳಿ ಕೃಷ್ಣ, ಎ .ಜನಾರ್ಧನ್, ದಿನಕರ್ ಕುಲಾಲ್ ಮೊದಲಾದವರು ಭಾಗವಹಿಸಿದ್ದು, ಜಿ.ಎಂ, ಸ್ಪೋರ್ಟ್ಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಸಂಗಮ್ ಫ್ರೆಂಡ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ. ವಂದಿಸಿದರು. ಕೃಷ್ಣ ಶ್ರೀಯಾನ್ ನಿರೂಪಿಸಿದರು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ (ರಿ) ಜಿ. ಎಂ. ಸ್ಪೋರ್ಟ್ಸ್ ಕ್ಲಬ್, ಸಂಗಮ್ ಫ್ರೆಂಡ್ಸ್ ಕ್ಲಬ್ (ರಿ), ಜಪ್ಪಿನಮೊಗರು, ಶ್ರೀ ಸುಬ್ರಮಣ್ಯ ಮಹಾ ಗಣಪತಿ ಸ್ಪೋರ್ಟ್ಸ್ ಕ್ಲಬ್, ಚೋಕುರು ಹಳೆಯಂಗಡಿ ಸಹ ಭಾಗಿತ್ವ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು