5:52 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ

26/01/2023, 11:51

ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಟಿ ಕೆ. ಶರತ್ ಕುಮಾರ್ ವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು.


ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭ ಮತ್ತು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸಾನ ಅವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿಡಿಓ ಪುರುಷೋತ್ತಮ ಜಿ. ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ (ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ) ಅವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು ಕಾರ್ಯಕ್ರಮದಲ್ಲಿ ಸಂಗೀತಾ ಎ. ಶೆಟ್ಟಿ (ಉಪಾಧ್ಯಕ್ಷರು ,ಗ್ರಾಮ ಪಂಚಾಯತ್ ಮಡಂತ್ಯಾರು), ಅಶೋಕ್ (ಅಧ್ಯಕ್ಷರು ಜೆಸಿಐ ಮಡಂತ್ಯಾರ್), ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಂ, ಚಿತ್ರಾ ಪಡಿಯಾರ್ ,ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು