11:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ

26/01/2023, 11:51

ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಟಿ ಕೆ. ಶರತ್ ಕುಮಾರ್ ವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು.


ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭ ಮತ್ತು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸಾನ ಅವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿಡಿಓ ಪುರುಷೋತ್ತಮ ಜಿ. ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ (ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ) ಅವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು ಕಾರ್ಯಕ್ರಮದಲ್ಲಿ ಸಂಗೀತಾ ಎ. ಶೆಟ್ಟಿ (ಉಪಾಧ್ಯಕ್ಷರು ,ಗ್ರಾಮ ಪಂಚಾಯತ್ ಮಡಂತ್ಯಾರು), ಅಶೋಕ್ (ಅಧ್ಯಕ್ಷರು ಜೆಸಿಐ ಮಡಂತ್ಯಾರ್), ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಂ, ಚಿತ್ರಾ ಪಡಿಯಾರ್ ,ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು