7:52 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಮಡಂತ್ಯಾರು: ರಾಷ್ಟ್ರೀಯ ಮತದಾರರ ದಿನಾಚರಣೆ; ರಸ್ತೆ ಜಾಥಾ, ಬೀದಿ ನಾಟಕ

26/01/2023, 11:51

ಪುಂಜಾಲಕಟ್ಟೆ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ , ಮತದಾರರ ಸಾಕ್ಷರತಾ ಸಂಘ ಮತ್ತು ದತ್ತು ಗ್ರಾಮವಾದ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಹಾಗೂ ಜೆಸಿಐ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಸ್ತೆ ಜಾಥಾ ಮತ್ತು ಬೀದಿ ನಾಟಕವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಟಿ ಕೆ. ಶರತ್ ಕುಮಾರ್ ವಹಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿದರು.


ಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭ ಮತ್ತು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸಾನ ಅವರು ಹೊಸ ಮತದಾರರಿಗೆ ಗುರುತಿನ ಚೀಟಿ ನೀಡುವ ಮುಖಾಂತರ ಮತ್ತು ಮತದಾನದ ಭಿತ್ತಿ ಪತ್ರವನ್ನು ಹಸ್ತಾಂತರಿಸುವ ಮುಖಾಂತರ ಸಾಂಕೇತಿಕವಾಗಿ ರಸ್ತೆ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಪಿಡಿಓ ಪುರುಷೋತ್ತಮ ಜಿ. ಪ್ರಸ್ತಾವಿಕ ನುಡಿಗಳನ್ನು ಆಡಿದರು. ರಾಜಶೇಖರ್ ರೈ (ಪಿಡಿಓ ಗ್ರಾಮ ಪಂಚಾಯತ್ ಮಾಲಾಡಿ) ಅವರು ಮತದಾನದ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮಡಂತ್ಯಾರ್ ಬಸ್ಸು ನಿಲ್ದಾಣದ ಆವರಣದಲ್ಲಿ ಮತದಾನದ ಮಹತ್ವದ ಕುರಿತು ಸ್ವಯಂಸೇವಕರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು ಕಾರ್ಯಕ್ರಮದಲ್ಲಿ ಸಂಗೀತಾ ಎ. ಶೆಟ್ಟಿ (ಉಪಾಧ್ಯಕ್ಷರು ,ಗ್ರಾಮ ಪಂಚಾಯತ್ ಮಡಂತ್ಯಾರು), ಅಶೋಕ್ (ಅಧ್ಯಕ್ಷರು ಜೆಸಿಐ ಮಡಂತ್ಯಾರ್), ಪಂಚಾಯಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಸಂತೋಷ್ ಪ್ರಭು ಎಂ, ಚಿತ್ರಾ ಪಡಿಯಾರ್ ,ಭಾರತೀಯ ಯುವ ರೆಡ್ ಕ್ರಾಸ್ ನ ಸಂಚಾಲಕರಾದ ಡಾ. ವೈಶಾಲಿ ಯು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು