12:11 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ

23/08/2024, 13:29

ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ ದೊಡ್ಡರಂಗೇ ಗೌಡ, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾಯಕರಾದ ವಿದ್ಯಾಭೂಷಣ ಮೊದಲಾದ ಗಣ್ಯರಿಗೆ ಈ ಹಿಂದೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಈ ಬಾರಿ ಯುವ ಪ್ರತಿಭಾನ್ವಿತ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲು ತಿಳಿಸಿದ್ದಾರೆ.
ಬೆಂಗಳೂರು ಮಾಜಿ ಮೇಯರ್ ಕಟ್ಟೆ ಸತ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೃಷ್ಟಿ ಗೌರವ ಅಧ್ಯಕ್ಷ ಶ್ರೀಕಾಂತ್ ಎಂ.ಜಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಸೃಷ್ಟಿ ಯಕ್ಷೋತ್ಸವದಲ್ಲಿ ಅಧ್ವರತ್ರಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.
*2 ದಿನ ಯಕ್ಷೋತ್ಸವ:*
ಸುಬ್ರಾಯ ಹೆಬ್ಬಾರ್ ಹಾಗೂ ಭರತ್ ರಾಜ್ ಪರ್ಕಳ ಅವರ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್ ಅವರ ವೇಷಭೂಷಣದಲ್ಲಿ
ಆ.24 ಸಂಜೆ 4 ಗಂಟೆಗೆ ದಕ್ಷಾಧ್ವರ ಹಾಗೂ 25 ಆ. ಭಾನುವಾರ ಸಂಜೆ 4 ಗಂಟೆಗೆ ಮಾರಣಾಧ್ವರ ಬಳಿಕ ರಾಜಸೂಯಾಧ್ವರ ಯಕ್ಷಗಾನ ಪ್ರದರ್ಶನ ಸೃಷ್ಟಿ ಕಲಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ನಡೆಯಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು