ಇತ್ತೀಚಿನ ಸುದ್ದಿ
ಮಡಿಕೇರಿ | ಬೆಟ್ಟತ್ತೂರು ಗ್ರಾಮದ ಕೊಂಪುಳಿ ಮನೆಯಲ್ಲಿ ಅದ್ದೂರಿಯಾಗಿ ನಡೆದ “ಧರ್ಮ ದೈವಗಳ” ಆರಾಧನೆ
15/04/2026, 04:51
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ತಾಲ್ಲೂಕು ಬೆಟ್ಟತೂರು ಗ್ರಾಮದಲ್ಲಿ ಕೊಂಪುಳಿ ಕುಟುಂಬದವರು ಇದೆ ಮೊದಲ ಭಾರಿಗೆ ನಡೆಸಿದ ಎರಡು ದಿನಗಳ ಧರ್ಮ ದೈವಗಳ ಆರಾಧನೆ ಅದ್ದೂರಿಯಾಗಿ ನೆರವೇರಿತು. ಇಲ್ಲಿವರೆಗೆ ಕೇವಲ ಕುಟುಂಬದ ಕುಲದೇವರು ವೆಂಕಟರಮಣ ಹರಿಸೇವೆ ಗೆ ಸೀಮಿತವಾಗಿದ್ದ ಆಚರಣೆಗಳು ಇದೀಗ ಕುಟುಂಬದ ಅಭಿವೃದ್ಧಿ ಹಾಗೂ ಸೂಕ್ತ ಸಂಕಷ್ಟ ಪರಿಹಾರವಾಗಿ ಕಾರ್ಯಗಳು ಯಶಸ್ವಿಯಾಗಿ ನಡೆದವು.





ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗುರುಕಾರಣ ದಿಂದ ಆರಂಭವಾಗಿ ಕುಕ್ಕೆತಿ ಮತ್ತು ಬಲ್ಲು, ಪಾಷಾಣ ಮೂರ್ತಿ ವರ್ಣರ ಪಂಜುರ್ಲಿ, ರಾಜಗುಳಿಗ ಭಾನುವಾರ ಬೆಳಗಿನ ಜಾವದ ವರೆಗೆ ನಡೆದಿದ್ದು, ಮರುದಿನ ರುದ್ರ ಚಾಮುಂಡಿ (ಧರ್ಮ ದೈವ ) ಕೋಲ ನಡೆದು ಕುಟುಂಬಸ್ಥರಿಗೆ ಪರಿಹಾರ ನೀಡಿ ಮುಂದಿನ ದೈವ ಕಾರ್ಯಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಎರಡು ದಿಂದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು, ನೆಂಟರಿಷ್ಟರು ಸಹಸ್ರ ಸಂಖ್ಯೆಯಲಿ ಬಂದು ಉತ್ಸವಕ್ಕೆ ಸಾಕ್ಷಿಯಾದರು.












