11:25 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಮಡಿಕೇರಿ: ಅಲ್ಯುಮಿನಿಯಂ ಏಣಿಗೆ ವಿದ್ಯುತ್‌ ಸ್ಪರ್ಶಿಸಿ ವೃದ್ಧ ಕಾರ್ಮಿಕ ದಾರುಣ ಸಾವು

22/05/2022, 22:44

ಮಡಿಕೇರಿ(reporterkarnataka.com):ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಮರ-ಗಿಡಗಳ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಕಾರ್ಮಿಕರೊಬ್ಬರು ಸಾವಿಗೀಡಾದ ಘಟನೆ ನಾಪೋಕ್ಲು ಸಮೀದ ಕಕ್ಕಬ್ಬೆ- ಮರಂದೋಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಆಚಾರಿ ರುದ್ರಪ್ಪ(65) ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಸಮಯದಲ್ಲಿ ವಿದ್ಯುತ್ ನಿಗಮದ ಲೈನ್’ಮೆನ್’ ಜೊತೆಯಲ್ಲಿ ಮರದ‌ ಕೊಂಬೆ ಕಡಿಯಲೆಂದು ಮರಕ್ಕೆ ಅಲ್ಯೂಮಿನಿಯಂ ಏಣಿಯನ್ನು ಇರಿಸಿದಾಗ, ಆಕಸ್ಮಿಕವಾಗಿ ಏಣಿ ವಿದ್ಯುತ್ ತಂತಿಗೆ ತಗುಲಿ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಮೃತರು ಪತ್ನಿ ಸೀತಮ್ಮ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮನೆಗೆ ಆಸರೆಯಾಗಿದ್ದ ಗಂಡನ ಸಾವಿನಿಂದ ಕುಟುಂಬ ಬೀದಿ ಪಾಲಾಗಿದೆ. ಇದಕ್ಕೆ ಚೆಸ್ಕಾಂ ನೇರ ಹೊಣೆಯಾಗಿದ್ದು, ಕೂಡಲೇ ಮೃತ ರುದ್ರಪ್ಪ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರ ಪರವಾಗಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂಡೀರ ಜಗದೀಶ್ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಠಾಣಾಧಿಕಾರಿ ಸದಾಶಿವ ಮತ್ತು ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು