4:03 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಮಡಿಕೇರಿ: ಅಲ್ಯುಮಿನಿಯಂ ಏಣಿಗೆ ವಿದ್ಯುತ್‌ ಸ್ಪರ್ಶಿಸಿ ವೃದ್ಧ ಕಾರ್ಮಿಕ ದಾರುಣ ಸಾವು

22/05/2022, 22:44

ಮಡಿಕೇರಿ(reporterkarnataka.com):ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಮರ-ಗಿಡಗಳ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಕಾರ್ಮಿಕರೊಬ್ಬರು ಸಾವಿಗೀಡಾದ ಘಟನೆ ನಾಪೋಕ್ಲು ಸಮೀದ ಕಕ್ಕಬ್ಬೆ- ಮರಂದೋಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಆಚಾರಿ ರುದ್ರಪ್ಪ(65) ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಸಮಯದಲ್ಲಿ ವಿದ್ಯುತ್ ನಿಗಮದ ಲೈನ್’ಮೆನ್’ ಜೊತೆಯಲ್ಲಿ ಮರದ‌ ಕೊಂಬೆ ಕಡಿಯಲೆಂದು ಮರಕ್ಕೆ ಅಲ್ಯೂಮಿನಿಯಂ ಏಣಿಯನ್ನು ಇರಿಸಿದಾಗ, ಆಕಸ್ಮಿಕವಾಗಿ ಏಣಿ ವಿದ್ಯುತ್ ತಂತಿಗೆ ತಗುಲಿ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಮೃತರು ಪತ್ನಿ ಸೀತಮ್ಮ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮನೆಗೆ ಆಸರೆಯಾಗಿದ್ದ ಗಂಡನ ಸಾವಿನಿಂದ ಕುಟುಂಬ ಬೀದಿ ಪಾಲಾಗಿದೆ. ಇದಕ್ಕೆ ಚೆಸ್ಕಾಂ ನೇರ ಹೊಣೆಯಾಗಿದ್ದು, ಕೂಡಲೇ ಮೃತ ರುದ್ರಪ್ಪ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರ ಪರವಾಗಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂಡೀರ ಜಗದೀಶ್ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಠಾಣಾಧಿಕಾರಿ ಸದಾಶಿವ ಮತ್ತು ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು