6:41 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ

28/08/2022, 17:20

ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ. 26 ರಂದು ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು . ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಲು ಹೊರಗಿನ ವ್ಯಕ್ತಿಗಳು ಹುನ್ನಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆ . 24 ರ ಬೆಳಗ್ಗೆ 6 ರಿಂದ ಆ .27 ಸಂಜೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

ಜಿಲ್ಲೆಯಲ್ಲಿ 4 ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನಜೀವನ ಎಂದಿನಂತೆಯೇ ಇತ್ತು. ಆದರೆ ಹೊರಗಿನ ಸಮಾಜಘಾತುಕರು ಜಿಲ್ಲೆಗೆ ನುಸುಳದಂತೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೆಚ್ಚಿನ ತಪಾಸಣೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಕೊಡಗಿನ ಪ್ರವಾಸೋದ್ಯಮದ ಮೇಲೂ ಕರಿನೆರಳು ಆವರಿಸಿತ್ತು. ಆದರೆ ಶನಿವಾರ ಸಂಜೆ 6 ಗಂಟೆಗೆ ನಿಷೇಧಾಜ್ಞೆ ಕೊನೆಕಗೊಂಡಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸ್ ಪಡೆಗಳೂ ಇದೀಗ ತಮ್ಮತಮ್ಮ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿವೆ. ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಾರದ ಸಂತೆಗಳೂ ಪುನರಾರಂಭಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು