11:38 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ

28/08/2022, 17:20

ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ. 26 ರಂದು ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು . ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಲು ಹೊರಗಿನ ವ್ಯಕ್ತಿಗಳು ಹುನ್ನಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆ . 24 ರ ಬೆಳಗ್ಗೆ 6 ರಿಂದ ಆ .27 ಸಂಜೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

ಜಿಲ್ಲೆಯಲ್ಲಿ 4 ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನಜೀವನ ಎಂದಿನಂತೆಯೇ ಇತ್ತು. ಆದರೆ ಹೊರಗಿನ ಸಮಾಜಘಾತುಕರು ಜಿಲ್ಲೆಗೆ ನುಸುಳದಂತೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೆಚ್ಚಿನ ತಪಾಸಣೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಕೊಡಗಿನ ಪ್ರವಾಸೋದ್ಯಮದ ಮೇಲೂ ಕರಿನೆರಳು ಆವರಿಸಿತ್ತು. ಆದರೆ ಶನಿವಾರ ಸಂಜೆ 6 ಗಂಟೆಗೆ ನಿಷೇಧಾಜ್ಞೆ ಕೊನೆಕಗೊಂಡಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸ್ ಪಡೆಗಳೂ ಇದೀಗ ತಮ್ಮತಮ್ಮ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿವೆ. ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಾರದ ಸಂತೆಗಳೂ ಪುನರಾರಂಭಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು