10:15 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ

05/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ.


ಮಡಿಕೇರಿಯ ದಸರಾ ಕಲಾ ವೇದಿಕೆಯಲ್ಲಿ ಬಹುಮಾನ ವಿತರಣೆ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿ ವೇದಿಕೆ ಏರಿ “ಮೋಸ.. ಮೋಸ” ಎಂದು ಘೋಷಣೆ ಕೂಗಿ ಅಲ್ಲಿದ್ದ ಪೊಡಿಯಮ್, ಎಲ್.ಇ.ಡಿ, ಧ್ವನಿವರ್ಧಕ, ಲೈಟ್ ಗಳನ್ನು ಹೊಡೆದು ಹಾಕಿ ಹಾಗೆ ಬಹುಮಾನಕ್ಕೆ ಇಟ್ಟ ಚಿನ್ನ ಹಾಗೂ ಬೆಳ್ಳಿಯ ಬಹುಮಾನಗಳನ್ನು ವೇದಿಕೆಯಿಂದ ಕೆಳಗೆ ಬಿಸಾಕಿ, 150 ಕುರ್ಚಿಗಳನ್ನು ಹಾನಿಪಡಿಸಿ ಒಟ್ಟು ಎರಡು ಲಕ್ಷ ರೂಪಾಯಿ ಎಷ್ಟು ನಷ್ಟ ಪಡಿಸಿರುವ ಹಿನ್ನೆಲೆಯಲ್ಲಿ ಪವನ್ ಕುಮಾರ್ ಕೆ.ಆರ್, ವಿನೋದ್ ಕಾರ್ಯಪ್ಪ ಸುಹಾಸ್ ಶೆಟ್ಟಿ, ಮೇಲೆ ಪೊಲೀಸರು ಬಿ.ಎನ್ ಎಸ್ 292, 324 (5)189(2) ರ ಅಡಿಯಲ್ಲಿ ಮೊಕದಮೆ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಇತರರನ್ನು ಕೂಡ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು