4:35 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು