10:59 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು