12:22 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಡಿಕೇರಿ: ಗೃಹ ಸಚಿವ ಹಾಗೂ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ: ದೂರು ದಾಖಲು

08/04/2022, 23:31

ಮಡಿಕೇರಿ(reporterkarnataka.com): ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ  ಅವರ ಕೋಮು ಪ್ರಚೋದನೆ ಹೇಳಿಕೆಯನ್ನು ಖಂಡಿಸಿ ಅವರನ್ನು ಬಂಧಿಸಬೇಕೆಂದು ಬೇಡಿಕೆಯೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಇಂದು ಮಡಿಕೇರಿ ನಗರ ಠಾಣೆ ಎದುರು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ. ನಡೆಸಲಾಯಿತು.

 ಗೃಹ ಸಚಿವ, ಸಿಟಿ ರವಿ  ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಕೂಡಲೇ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಮಡಿಕೇರಿ ನಗರ ಆರಕ್ಷಕ ಠಾಣೆಗೆ ತೆರಳಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋಮು ಪ್ರಚೋದನೆ ಹೇಳಿಕೆ ನೀಡಿದ ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆ.ಪಿ. ಚಂದ್ರಕಲಾ, ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಸುರಯ್ಯ ಅಬ್ರಾರ್, NSUI ಜಿಲ್ಲಾಧ್ಯಕ್ಷ ರೋಷನ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಮಾಜಿ ಸೈನಿಕರ ಘಟಕದ ಜಿಲ್ಲಾಧ್ಯಕ್ಷ ಗಣೇಶ್, RGPRS ಜಿಲ್ಲಾ ಸಂಚಾಲಕ ತೆನ್ನೀರ ಮೈನ, ಕಾನೂನು ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಧರನ್ ನಾಯರ್, ಫ್ಯಾನ್ಸಿ ಪಾರ್ವತಿ, ಯಾಕೋಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಲಕೃಷ್ಣ, ಸಂಪಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಡಿಸಿಸಿ ಸದಸ್ಯರ ಲಿಯಾಕತ್ ಆಲಿ, ನಗರಸಭೆ ಮಾಜಿ ಸದಸ್ಯರಾದ ಉದಯಕುಮಾರ್ ಹಾಗೂ ವೆಂಕಟೇಶ್, ಸಾಮಾಜಿಕ ಜಾಲತಾಣದ ಬೋಪಣ್ಣ ಹಾಗೂ ಎನ್.ಜಿ ಅಯ್ಯಪ್ಪ, ಡಿಸಿಸಿ ಸದಸ್ಯರಾದ ಕೇಟೊಳಿ ಮೋಹನ್ರಾಜ್, ಬೆಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಪಂಡ ಗಣೇಶ್, ಪುಲಿಯಂಡ ಜಗದೀಶ್, ವಾಸು ಕೊಯಿನಾಡು, ಮುನೀರ್ ಮಾಚರ್, ಡಿಸಿಸಿ ಸದಸ್ಯರಾದ ಅಬ್ದುಲ್ ರಜಾಕ್, ಪುಷ್ಪ ಪೂಣಚ್ಚ, ಕೆಎ ಆನಂದ್, ಸೈಮನ್ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು