6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ: ಹುಲಿಯ ಉಗುರು ಅಕ್ರಮ ಮಾರಾಟ ಯತ್ನ; ಗುಂಡ್ಲುಪೇಟೆಯ ಇಬ್ಬರ ಬಂಧನ

08/05/2022, 08:28

ಮಡಿಕೇರಿ(reporterkarnataka.com): ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ಗುಂಡ್ಲುಪೇಟೆ ಮೂಲದ ಕುಮಾರ ಮತ್ತು ವಿನು ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‍ಗೇಟ್ ಬಳಿಯಲ್ಲಿರುವ ಬಸ್ ನಿಲ್ದಾಣದ ಎಡ ಬದಿಯಲ್ಲಿ ಇಬ್ಬರು ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮೇ 6ರಂದು ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಸಂದರ್ಭ ಸಿಬ್ಬಂದಿಗಳು ದಾಳಿ ನಡೆಸಿ ಎರಡು ಮಂದಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ.

ಆರೋಪಿಗಳ ವಶದಲ್ಲಿದ್ದ 4 ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು