8:37 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು