5:33 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು