5:22 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು