9:55 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ | ಕಂದಕಕ್ಕೆ ಉರುಳಿದ ಕಾರ್ಮಿಕರ ಸಾಗಿಸುತ್ತಿದ್ದ ಜೀಪ್: ವ್ಯಕ್ತಿ ಸಾವು

30/03/2026, 14:48

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಜೀಪು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಪೇರೂರು ಗ್ರಾಮದಲ್ಲಿ ನಡೆದಿದೆ.


ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ಕಾಫಿ ಬೆಳೆಗಾರ ಶರೀ ಮೇದಪ್ಪ (54) ಮೃತ ವ್ಯಕ್ತಿ. ತಮ್ಮ ಕಾಫಿ ತೋಟದಿಂದ ಕಾರ್ಮಿಕರನ್ನು ಕರೆದುಕೊಂಡು ಮನೆಗೆ ಹಿಂತಿರುಗುತಿದ್ದ ವೇಳೆ ಜೀಪು ಚಾಲನೆ ಮಾಡುತ್ತಿದ್ದ ಶರಿ ಮೇದಪ್ಪರಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ 70 ಅಡಿ ಕೆಳಕ್ಕೆ ಉರುಳಿ ಬಿದ್ದಿದೆ. ಈ ಸಂದರ್ಭ ಜೀಪಿನಿಂದ ಹೊರಕ್ಕೆ ಎಸೆಯಲ್ಪಟ್ಟ ಮೇದಪ್ಪ ಪ್ರಜ್ಞೆ ಕಳೆದುಕೊಂಡಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಜೀಪು ಸಂಪೂರ್ಣ ಜಖಂ ಗೊಂಡಿದ್ದು, ಕಾರ್ಮಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು