1:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು