12:17 PM Monday3 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್:  10ನೇ ವರ್ಷದ ರಕ್ತದಾನ ಶಿಬಿರ          

26/12/2021, 20:04

ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ನೆರವೇರಿಸಿದರು. ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್  ಮಾತನಾಡಿ, ಈ ದೇಶ ಕಂಡ ಅಪ್ರತಿಮ ದೇಶಭಕ್ತ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶಗಳನ್ನೇ ಪ್ರೇರಣೆಯಾಗಿಯಾಗಿಸಿ ಸ್ಥಳೀಯ ಸ್ವಾಗತ ಯುವಕ ಸಂಘದ ಮೂಲಕ ನಡೆಸುತ್ತಿರುವ ರಕ್ತದಾನ ಶಿಬಿರ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಯುವಕ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ , ಗೌರಿಶಂಕರ ದೇವಾಲಯದ ಟ್ರಸ್ಟಿ ಪಿ.ಎಂ. ದಾಮೋದರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಫೀಕ್,ಮುಖ್ಯೋಪಾಧ್ಯರಾದ ಸಬೀತಾ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು,ಕಾಂಗೀರ ಕೀರ್ತನ್,ಹನೀಫ್,ಶುಭಾ ಭರತ್ ಉಪಸ್ಥಿತರಿದ್ದರು. 

ಯುವಕ ಸಂಘದ ಅಧ್ಯಕ್ಷ ಜೆ.ಹರೀಶ್ ಸ್ವಾಗತಿಸಿ.ಸದಸ್ಯ ಟಿ.ವಿ. ಲೋಕೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು