1:41 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Madikeri | ಕತ್ತಲೆಕಾಡು–ಮರಗೋಡು ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆದ ರಸ್ತೆ ತಡೆ ಪ್ರತಿಭಟನೆ

26/12/2025, 16:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಹದಗೆಟ್ಟ ಕತ್ತಲೆಕಾಡು – ಮರಗೋಡು ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ಅನಾನು ಕುಲತೆಯ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ ಮರಗೋಡು ಗ್ರಾಮದಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕತ್ತಲೆಕಾಡು–ಮರಗೋಡು ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಡಾಂಬರು ಕಾಣೆಯಾಗಿದೆ. ಹಾದಿಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳಿಂದ ಅವೃತವಾಗಿ ವಾಹನಗಳ ಸಂಚಾರಕ್ಕೆ ತೊಡಕ್ಕಾಗಿದೆ. ಈ ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು, ವಿದ್ಯಾರ್ಥಿಗಳು, ಕಾರ್ಮಿಕರು, ರೋಗಿಗಳು ಹಾಗೂ ಸಾರ್ವಜನಿಕರು, ವ್ಯಾಪಾರಿಗಳು ಪ್ರತಿದಿನ ಅಪಾಯದ ನಡುವೆ ಬಹು ಪ್ರಯಾಸದಿಂದ ತೀವ್ರ ಸಂಕಷ್ಟದಲ್ಲಿ ಸಂಚರಿಸುವಂತಾಗಿದೆ. ರಸ್ತೆಯನ್ನು ದುರಸ್ತಿಪಡಿಸಿಕೊಡುವಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ತಾಳಿದ್ದು, ಇದನ್ನು ಖಂಡಿಸಿ ನಡೆದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮರಗೋಡು ವ್ಯಾಪಾರಸ್ಥರು ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದರು.

ರಸ್ತೆ ತಡೆಯ ಪರಿಣಾಮವಾಗಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಸ್ಥಳಕ್ಕೆ ಮಡಿಕೇರಿ DSP ಸೂರಜ್ ಅವರು ಭೇಟಿ ನೀಡಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಶೀಘ್ರದಲ್ಲಿ ರಸ್ತೆಯನ್ನು ದುರಸ್ತಿಪಡಿಸಿಕೊಡುವ ಭರವಸೆ ನೀಡಲು ಪ್ರತಿಭಟನಾಕಾರರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು