9:12 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

Madikeri | ಕತ್ತಲೆಕಾಡು–ಮರಗೋಡು ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆದ ರಸ್ತೆ ತಡೆ ಪ್ರತಿಭಟನೆ

26/12/2025, 16:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಹದಗೆಟ್ಟ ಕತ್ತಲೆಕಾಡು – ಮರಗೋಡು ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ಅನಾನು ಕುಲತೆಯ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ ಮರಗೋಡು ಗ್ರಾಮದಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕತ್ತಲೆಕಾಡು–ಮರಗೋಡು ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಡಾಂಬರು ಕಾಣೆಯಾಗಿದೆ. ಹಾದಿಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳಿಂದ ಅವೃತವಾಗಿ ವಾಹನಗಳ ಸಂಚಾರಕ್ಕೆ ತೊಡಕ್ಕಾಗಿದೆ. ಈ ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು, ವಿದ್ಯಾರ್ಥಿಗಳು, ಕಾರ್ಮಿಕರು, ರೋಗಿಗಳು ಹಾಗೂ ಸಾರ್ವಜನಿಕರು, ವ್ಯಾಪಾರಿಗಳು ಪ್ರತಿದಿನ ಅಪಾಯದ ನಡುವೆ ಬಹು ಪ್ರಯಾಸದಿಂದ ತೀವ್ರ ಸಂಕಷ್ಟದಲ್ಲಿ ಸಂಚರಿಸುವಂತಾಗಿದೆ. ರಸ್ತೆಯನ್ನು ದುರಸ್ತಿಪಡಿಸಿಕೊಡುವಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ತಾಳಿದ್ದು, ಇದನ್ನು ಖಂಡಿಸಿ ನಡೆದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮರಗೋಡು ವ್ಯಾಪಾರಸ್ಥರು ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದರು.

ರಸ್ತೆ ತಡೆಯ ಪರಿಣಾಮವಾಗಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಸ್ಥಳಕ್ಕೆ ಮಡಿಕೇರಿ DSP ಸೂರಜ್ ಅವರು ಭೇಟಿ ನೀಡಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಶೀಘ್ರದಲ್ಲಿ ರಸ್ತೆಯನ್ನು ದುರಸ್ತಿಪಡಿಸಿಕೊಡುವ ಭರವಸೆ ನೀಡಲು ಪ್ರತಿಭಟನಾಕಾರರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು