10:52 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಡಿಕೇರಿ: ಸಂಬಂಧಿಕರ ಮನೆಗೆ ಬಂದ 7ನೇ ತರಗತಿ ವಿದ್ಯಾರ್ಥಿ ನೀರುಪಾಲು

09/05/2022, 09:12

ಮಡಿಕೇರಿ(reporterkarnataka.com):
ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.

ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ (12) ಮೃತಪಟ್ಟ ಬಾಲಕ. 7ನೇ ತರಗತಿಯಲ್ಲಿ ಕಲಿಯುತ್ತಿದ್ದ  ಫರ್ಹಾನ್, ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ  ಅಜ್ಜ, ಅಜ್ಜಿಯ ಮನೆಗೆ ಬಂದಿದ್ದ.

ಶನಿವಾರಸಂತೆಯಲ್ಲಿ  ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದ ಮಾವನ ಅಂಗಡಿಯಲ್ಲಿ ಸಂಜೆಯವರೆಗೆ ಇದ್ದ ಪರ್ಹಾನ್, ಸಂಜೆ  5 ಗಂಟೆ ಸುಮಾರಿಗೆ ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ  ಹೊಳೆಯಲ್ಲಿ ಈಜಲು ತೆರಳಿದ್ದಾನೆ.ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ಫರ್ಹಾನ್ ನೀರಿಗೆ ಬಿದ್ದಿದ್ದಾನೆ. ಎಷ್ಟೇ ಹೊತ್ತಾದರೂ ನೀರಿನಿಂದ ಮೇಲೆ ಬಾರದ ಹಿನ್ನೆಲೆಯಲ್ಲಿ ಮಾವನ ಮಗ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು