7:48 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ

24/07/2025, 10:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ದಕ್ಷಿಣ ಕೊಡಗಿನಲ್ಲಿ ರೈತರ ಜಾನುವಾರುಗಳ ಮೇಲೆ ಹುಳಿಯು ನಿರಂತರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತಿಗೋಡು ಕ್ಯಾಂಪ್ ನಿಂದ ಭೀಮಾ ಮತ್ತು ಬಳ್ಳೆ ಕ್ಯಾಂಪ್ ನಿಂದ ಮಹೇಂದ್ರ ಸಾಕಾನೆಗಳನ್ನು ಬಳಸಿಕೊಂಡು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಂತೆ ವಿವಿಧ ತಂಡಗಳು ಕಾರ್ಯಾಚರಣೆ ನಡೆಸಿದರೂ ಹುಲಿಯ ಗುರುತು ಹಾಗೂ ಚಲನವಲನ ಪತ್ತೆ ಸಾಧ್ಯವಾಗಿಲ್ಲ. ವಿವಿಧೆಡೆ ಕ್ಯಾಮರಾಗಳನ್ನು ಅಳವಡಿಸಿ ಹುಲಿಯ ಚಿತ್ರ ಸೆರೆಗೆ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಿಲ್ಲ. ಇದೀಗ ಸಾಕಾನೆಗಳ ಕಾರ್ಯಾಚರಣೆಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಎಂದಿನಂತೆ 11ನೇ ದಿನ ಅರಣ್ಯ ಸಿಬ್ಬಂದಿಗಳು ಕೂoಬಿoಗ್ ಮುಂದುವರೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು