8:00 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ

24/07/2025, 10:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ದಕ್ಷಿಣ ಕೊಡಗಿನಲ್ಲಿ ರೈತರ ಜಾನುವಾರುಗಳ ಮೇಲೆ ಹುಳಿಯು ನಿರಂತರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತಿಗೋಡು ಕ್ಯಾಂಪ್ ನಿಂದ ಭೀಮಾ ಮತ್ತು ಬಳ್ಳೆ ಕ್ಯಾಂಪ್ ನಿಂದ ಮಹೇಂದ್ರ ಸಾಕಾನೆಗಳನ್ನು ಬಳಸಿಕೊಂಡು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಂತೆ ವಿವಿಧ ತಂಡಗಳು ಕಾರ್ಯಾಚರಣೆ ನಡೆಸಿದರೂ ಹುಲಿಯ ಗುರುತು ಹಾಗೂ ಚಲನವಲನ ಪತ್ತೆ ಸಾಧ್ಯವಾಗಿಲ್ಲ. ವಿವಿಧೆಡೆ ಕ್ಯಾಮರಾಗಳನ್ನು ಅಳವಡಿಸಿ ಹುಲಿಯ ಚಿತ್ರ ಸೆರೆಗೆ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಿಲ್ಲ. ಇದೀಗ ಸಾಕಾನೆಗಳ ಕಾರ್ಯಾಚರಣೆಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಎಂದಿನಂತೆ 11ನೇ ದಿನ ಅರಣ್ಯ ಸಿಬ್ಬಂದಿಗಳು ಕೂoಬಿoಗ್ ಮುಂದುವರೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು