3:36 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

Madikeri | ದಕ್ಷಿಣ ಕೊಡಗು: ಹುಲಿ ಸೆರೆ ಕಾರ್ಯಾಚರಣೆ; ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿಂಗ್ ಸ್ಥಗಿತ

24/07/2025, 10:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಏಳು ದಿನಗಳಿಂದ ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮಳೆಯ ನಡುವೆ ಸಾಕಾನೆಗಳ ಸಹಾಯದಿಂದ ನಡೆಸುತ್ತಿದ್ದ ಕೂoಬಿoಗ್ ಸ್ಥಗಿತಗೊಳಿಸಿದ್ದು, ಅರಣ್ಯ ಸಿಬ್ಬಂದಿಗಳು ಎಂದಿನಂತೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ದಕ್ಷಿಣ ಕೊಡಗಿನಲ್ಲಿ ರೈತರ ಜಾನುವಾರುಗಳ ಮೇಲೆ ಹುಳಿಯು ನಿರಂತರ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತಿಗೋಡು ಕ್ಯಾಂಪ್ ನಿಂದ ಭೀಮಾ ಮತ್ತು ಬಳ್ಳೆ ಕ್ಯಾಂಪ್ ನಿಂದ ಮಹೇಂದ್ರ ಸಾಕಾನೆಗಳನ್ನು ಬಳಸಿಕೊಂಡು ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಹುಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಂತೆ ವಿವಿಧ ತಂಡಗಳು ಕಾರ್ಯಾಚರಣೆ ನಡೆಸಿದರೂ ಹುಲಿಯ ಗುರುತು ಹಾಗೂ ಚಲನವಲನ ಪತ್ತೆ ಸಾಧ್ಯವಾಗಿಲ್ಲ. ವಿವಿಧೆಡೆ ಕ್ಯಾಮರಾಗಳನ್ನು ಅಳವಡಿಸಿ ಹುಲಿಯ ಚಿತ್ರ ಸೆರೆಗೆ ಪ್ರಯತ್ನ ನಡೆಯಿತಾದರೂ ಪ್ರಯೋಜನವಾಗಿಲ್ಲ. ಇದೀಗ ಸಾಕಾನೆಗಳ ಕಾರ್ಯಾಚರಣೆಯನ್ನು ಹಿಂದಕ್ಕೆ ಪಡೆಯಲಾಗಿದ್ದು, ಎಂದಿನಂತೆ 11ನೇ ದಿನ ಅರಣ್ಯ ಸಿಬ್ಬಂದಿಗಳು ಕೂoಬಿoಗ್ ಮುಂದುವರೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು