12:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಉಡಗಳ ಮಾರಾಟ ಯತ್ನ:  ಸಿಐಡಿ ಪೊಲೀಸರಿಂದ 3 ಮಂದಿ ಆರೋಪಿಗಳ ಸೆರೆ

26/04/2022, 11:29

ಮಡಿಕೇರಿ(reporterkarnataka.com): ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕ ಬಂಧಿಸಿದೆ.

ಸತೀಶ್‌, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‌ ಗೇಟ್‌ ಬಳಿ 3 ಜೀವಂತ ಉಡಗಳ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಸಿಬಂದಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಉಡಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಐಡಿ ಪೊಲೀಸ್‌ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್‌ ಮಹಾನಿರೀಕ್ಷಕ ಕೆ.ವಿ. ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್‌.ಟಿ. ಶ್ರೀನಿವಾಸ್‌ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬಂದಿ ಶೇಖರ್‌, ರಾಜೇಶ್‌, ರಾಘವೇಂದ್ರ, ಯೋಗೇಶ್‌, ಸ್ವಾಮಿ ಮತ್ತು ಮಂಜುನಾಥ್‌ ಅವರು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು