3:29 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮದುವೆ ಛತ್ರದಲ್ಲಿ ನಾಟಕ ಮಾಡ್ಲಿಕ್ಕಾಗುತ್ತಾ ? ಮಂಗಳೂರಿಗೂ ರಂಗ ಮಂದಿರ ಬೇಕು : ಅಡ್ಡಂಡ ಕಾರ್ಯಪ್ಪ

10/05/2022, 21:37

ಮಂಗಳೂರು(ReporterKarnataka.com) ಮಂಗಳೂರಿಗೂ ರಂಗ ಮಂದಿರ ಬೇಕು. ಮದುವೆಯ ಛತ್ರದಲ್ಲಿ ನಾಟಕ ಮಾಡ್ಲಿಕೆ ಆಗುತ್ತಾ ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪ್ರಶ್ನಿಸಿದ್ದಾರೆ.

ಅವರು ಮಂಗಳವಾರ ನಗರದ ಪುರಭವನದಲ್ಲಿ ಪ್ರದರ್ಶನಗೊಂಡ ಪರ್ವ ಮಹಾ ರಂಗ ಪ್ರಯೋಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಂಗಳೂರಿಗೂ ರಂಗ ಮಂದಿರ ಬೇಕೆಂಬ ಕೂಗು ನಲ್ವತ್ತು ವರ್ಷಗಳಿಂದ ಕೇಳಿ ಬರುತ್ತಿದೆ. ಆದರೆ ಇನ್ನೂ ಸಾಕಾರಗೊಂಡಿಲ್ಲ, ಇಲ್ಲಿಯ ಕಲಾವಿದರೊಂದಿಗೆ ನಾನೂ ಧ್ವನಿಗೂಡಿಸುತ್ತಿದ್ದೇನೆ, ಲಕ್ಷಗಟ್ಟಲೆ ಹಣ ಖರ್ಚು ಮಾಡಿ ನಾಟಕ ಪ್ರದರ್ಶನ ಮಾಡುವುದು ಸುಲಭ ಸಾಧ್ಯವಲ್ಲ, ಸಂಸ್ಕೃತಿ ಸಚಿವರಿಗೂ ಈ ಕೂಗು ಕೇಳಲಿ ರಂಗಮಂದಿರ ನಿರ್ಮಾಣವಾಗಲಿ ಎಂದರು.


ಎಸ್.ಎಲ್.ಭೈರಪ್ಪನವರಂತಹ ಮೇರು ಸಾಹಿತಿಯ ಮಹಾ ಕಾವ್ಯ ಪರ್ವವನ್ನು ರಂಗದಲ್ಲಿ ಬಿತ್ತರಿಸುವುದು ಕಠಿಣ ಕಾರ್ಯವಾಗಿತ್ತು ಅದನ್ನು ಬಹಳ ನಾಜೂಕಾಗಿ ನಿರ್ದೇಶಕ ಪ್ರಕಾಶ್ ಬೆಳವಾಡಿ ಮಾಡಿದ್ದಾರೆ‌. ಮಂಗಳೂರಿನಲ್ಲಿ ಇದು 33ನೇ ಪ್ರದರ್ಶನ ಕಾಣುತ್ತಿದೆ ಎಂದರು.


ಈ ಸಂದರ್ಭ ಹಿರಿಯ ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ, ತುಳು ರಂಗಭೂಮಿ ನಟ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು