12:09 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮದುವೆ ಮನೆಯಿಂದ ಬಾಲಕಿ ಅಪಹರಿಸಿ ಮದುವೆಯಾದ ಮಂಡ್ಯ ಯುವಕನ ಬಂಧನ

06/05/2022, 21:05

ಮೈಸೂರು(reporterkarnataka.com): ಇದೆಲ್ಲ ಸಿನಿಮಾದಲ್ಲಿ ನಡೆದಂತೆ ಘಟಿಸಿದ ಹೋಗಿದೆ. ಮದುವೆ ಮನೆಗೆ ಆಗಮಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ

ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಂಬಂಧಿಕರ ಮದುವೆಗೆಂದು ತನ್ನ ಪೋಷಕರೊಂದಿಗೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಕಲ್ಯಾಣ ಮಂಟಪಕ್ಕೆ ಬಂದು ತಂಗಿದ್ದ ಬಾಲಕಿಯನ್ನು ಮಂಡ್ಯ ಜಿಲ್ಲೆಯ ಬೇಲೂರು ಗ್ರಾಮದ ಪ್ರತಾಪ್ ಅಪಹರಿಸಿಕೊಂಡು ಹೋಗಿದ್ದ.

ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಚರಣೆ ನಡೆಸಿದ ಮೈಸೂರಿನ ವಿವಿಪುರಂ ಠಾಣೆಯ ಪೊಲೀಸರು, ತನಿಖೆ ನಡೆಸಿದಾಗ, ಮಂಡ್ಯ ಜಿಲ್ಲೆ ಬೇಲೂರು ಗ್ರಾಮದ ಪ್ರತಾಪ್ ಅಪ್ರಾಪ್ತೆಯನ್ನ ಅಪಹರಿಸಿಕೊಂಡು ಹೋಗಿ ಮಂಡ್ಯದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಮದುವೆಯಾಗಿರುವುದು ಪತ್ತೆಯಾಯಿತು. ಕೂಡಲೇ ಆತನನ್ನು ಬಂಧಿಸಿದ ಪೊಲೀಸರು, ಅಪಹರಣಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು, ಬಾಲಕಿಯನ್ನು ರಕ್ಷಿಸಿ, ಬಾಲಮಂದಿರದ ವಶಕ್ಕೆ ಆಕೆಯನ್ನು ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು