11:54 PM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮದುವೆ ಮನೆಯಿಂದ ಬಾಲಕಿ ಅಪಹರಿಸಿ ಮದುವೆಯಾದ ಮಂಡ್ಯ ಯುವಕನ ಬಂಧನ

06/05/2022, 21:05

ಮೈಸೂರು(reporterkarnataka.com): ಇದೆಲ್ಲ ಸಿನಿಮಾದಲ್ಲಿ ನಡೆದಂತೆ ಘಟಿಸಿದ ಹೋಗಿದೆ. ಮದುವೆ ಮನೆಗೆ ಆಗಮಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ

ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಂಬಂಧಿಕರ ಮದುವೆಗೆಂದು ತನ್ನ ಪೋಷಕರೊಂದಿಗೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಕಲ್ಯಾಣ ಮಂಟಪಕ್ಕೆ ಬಂದು ತಂಗಿದ್ದ ಬಾಲಕಿಯನ್ನು ಮಂಡ್ಯ ಜಿಲ್ಲೆಯ ಬೇಲೂರು ಗ್ರಾಮದ ಪ್ರತಾಪ್ ಅಪಹರಿಸಿಕೊಂಡು ಹೋಗಿದ್ದ.

ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಚರಣೆ ನಡೆಸಿದ ಮೈಸೂರಿನ ವಿವಿಪುರಂ ಠಾಣೆಯ ಪೊಲೀಸರು, ತನಿಖೆ ನಡೆಸಿದಾಗ, ಮಂಡ್ಯ ಜಿಲ್ಲೆ ಬೇಲೂರು ಗ್ರಾಮದ ಪ್ರತಾಪ್ ಅಪ್ರಾಪ್ತೆಯನ್ನ ಅಪಹರಿಸಿಕೊಂಡು ಹೋಗಿ ಮಂಡ್ಯದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಮದುವೆಯಾಗಿರುವುದು ಪತ್ತೆಯಾಯಿತು. ಕೂಡಲೇ ಆತನನ್ನು ಬಂಧಿಸಿದ ಪೊಲೀಸರು, ಅಪಹರಣಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು, ಬಾಲಕಿಯನ್ನು ರಕ್ಷಿಸಿ, ಬಾಲಮಂದಿರದ ವಶಕ್ಕೆ ಆಕೆಯನ್ನು ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು