5:21 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು