11:33 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು