8:47 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು