8:59 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ

23/05/2025, 10:34

ಮಂಗಳೂರು (www.reporterkarnataka.com)

ಮದುವೆ ಸಂಬಂಧ ವಿಚಾರ ಕುರಿತು ತನ್ನ ಚಿಕ್ಕಪ್ಪನನ್ನೇ ಚೂರಿ ಇರಿದು ಕೊಂದ ಘಟನೆ ಮಂಗಳೂರಿನ ವಳಚ್ಚಿಲ್ ಬಳಿ ಗುರುವಾರ ರಾತ್ರಿ ನಡೆದಿದೆ. ವಾಮಂಜೂರಿನ ನಿವಾಸಿ ಸುಲೈಮಾನ್ (50) ಮೃತರಾಗಿದ್ದು, ಅವರ ತಮ್ಮನ ಮಗ ವಳಚ್ಚಿಲ್ ನಿವಾಸಿ ಮುಸ್ತಫಾ(30) ಚೂರಿ ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.
ಸುಲೈಮಾನ್ ಅವರ ಮಕ್ಕಳಾದ ರಿಯಾಬ್ ಹಾಗೂ ಸಿಯಾಬ್ ಅವರಿಗೂ ಮುಸ್ತಫಾ ಚೂರಿ ಇರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿವರ : ಮದುವೆ ಬ್ರೋಕರ್ ಆಗಿ ಕೆಲಸ ಮಾಡುತ್ತಿರುವ ಸುಲೈಮಾನ್ ಅವರು ಎಂಟು ತಿಂಗಳ ಹಿಂದೆ ಮುಸ್ತಾಫ ಅವರಿಗೆ ಅಡ್ಡೂರು ಮೂಲದ ಶಹೀನಾಝ್ ಎನ್ನುವ ಹುಡುಗಿ ಹುಡುಕಿ ಮದುವೆ ಸಂಬಂಧವನ್ನು ಕುದುರಿಸಿದ್ದರು. ಮದುವೆಯಾದ ಬಳಿಕ ನಿರಂತರವಾಗಿ ಮುಸ್ತಾಫ ಹಾಗೂ ಪತ್ನಿಯ ನಡುವೆ ಮನಸ್ತಾಪ ಉಂಟಾಗುತ್ತಿತ್ತು ಹಾಗೂ ಹುಡುಗಿ ಮುಸ್ತಾಫ ಅನುಮತಿ ಇಲ್ಲದೆ ತವರು ಮನೆಗೆ ಹೋಗುತ್ತಿದ್ದಳು, ಮಾತ್ರವಲ್ಲದೆ ಇನ್ನೂ ಹಲವು ವಿಚಾರಗಳ ಬಗ್ಗೆ ಮುಸ್ತಾಫ ಕುಪಿತಗೊಂಡಿದ್ದ.
ಘಟನೆಯಾದ ದಿನದಂದು ಮುಸ್ತಾಫ ಸುಲೈಮಾನ್ ಅವರಿಗೆ ಕಾಲ್‌ ಮಾಡಿ ಅವಾಚ್ಯವಾಗಿ ಬೈದಿದ್ದು, ಅದಕ್ಕೆ ಪ್ರತಿಯಾಗಿ ವಿಚಾರದ ಕುರಿತು ಚರ್ಚಿಸಲು ಸುಲೈಮಾನ್ ತಮ್ಮ ಮಕ್ಕಳ ಜತೆಗೆ ವಳಚ್ಚಿಲ್‌ನ ಮುಸ್ತಾಫ ನಿವಾಸಕ್ಕೆ ತೆರಳಿದ್ದರು. ವಾಗ್ವಾದ ನಡೆದು ಫಲಕಾರಿಯಾಗಲಿಲ್ಲ ಎಂದು ಸುಲೈಮಾನ್ ವಾಪಾಸ್ ಮನೆ ಗೇಟ್‌ಗೆ ಬರುತ್ತಿದ್ದ ಸಂದರ್ಭ ಮುಸ್ತಾಫ ಚೂರಿ ತೆಗೆದುಕೊಂಡು ಬಂದು ಸುಲೈಮಾನ್ ಕುತ್ತಿಗೆಯ ಬಲ ಭಾಗಕ್ಕೆ ಇರಿದಿದ್ದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಬಳಿಕ ಇಬ್ಬರೂ ಪುತ್ರರ ಮೇಲೂ ಚೂರಿಯಿಂದ ದಾಳಿ ಮಾಡಿದ್ದು, ಗಾಯಾಳುಗಳನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಸುಲೈಮಾನ್ ದಾರಿ ಮಧ್ಯದಲ್ಲಿ ಸಾವಿಗೀಡಾಗಿದ್ದಾರೆ.

ಮುಸ್ತಾಫನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು