6:57 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು