11:38 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು