7:39 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು