8:01 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು