3:05 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮದ್ಯ ಖರೀದಿ ಇನ್ನು ಸುಲಭ: ಲೈಸೆನ್ಸ್ ಪಡೆದು ಎಲ್ಲಿ ಬೇಕಾದರೂ ಖರೀದಿಸಬಹುದು; ರಾಜ್ಯ ಸರಕಾರದಿಂದ ಶೀಘ್ರ ಆದೇಶ?

17/05/2022, 08:02

ಬೆಂಗಳೂರು(reporterkarnataka.com): ತಾತ್ಕಾಲಿಕ ಅಥವಾ ಸಾಂದರ್ಭಿಕ ಸನ್ನದು ಪಡೆಯುವವರಿಗೆ ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಶೀಘ್ರ ಆದೇಶ ಪ್ರಕಟಿಸಲಿದೆ. ಹೀಗಾಗಿ ಮದ್ಯ ಖರೀದಿ ಇನ್ನು ಸುಲಭವಾಗಲಿದೆ.

ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ಕೆಎಸ್ ಬಿಸಿಎಲ್ ಡಿಪೋಗಳಲ್ಲಿ ಮಾತ್ರವಲ್ಲದೆ ಇತರೆ ಮಧ್ಯ ಮಳಿಗೆಗಳಲ್ಲೂ ಖರೀದಿಗೆ ಅವಕಾಶ ನೀಡಲು ಏಪ್ರಿಲ್ ನಲ್ಲಿ ಕರಡು ನಿಯಮಗಳನ್ನು ಪ್ರಕಟಿಸಿತ್ತು, ಮದ್ಯ ಮಾರಾಟಗಾರರ ಒಕ್ಕೂಟ ಸೇರಿದಂತೆ ಯಾರು ಸಹ ಕರಡು ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ, ಹೀಗಾಗಿ ಸದ್ಯದಲ್ಲೇ ಅಂತಿಮ ಆದೇಶ ಪ್ರಕಟಿಸಲಾಗುವುದು ಎಂದು ಅಬಕಾರಿ ಇಲಾಖೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಲ್ -5 ಸನ್ನದುದಾರರು ಈವರೆಗೆ ಕರ್ನಾಟಕ ರಾಜ್ಯ ಪಾನೀಯ ನಿಗಮ ಡಿಪೋಗಳಿಂದ ಮಾತ್ರ ಮದ್ಯ ಖರೀದಿ ಮಾಡಲು ಅನುಮತಿ ಇತ್ತು, ನಿಗದಿತ ದಿನಾಂಕದಂದು ಸನ್ನದು ಜೊತೆಗೆ ಡಿಪೋಗೆ ತೆರಳಿ ಆಗ ಲಭ್ಯವಿರುವ  ಮದ್ಯಗಳಿಗೆ ಇಂಡೆಂಟ್ ಸಲ್ಲಿಸಬೇಕಿತ್ತು, ಇಂಡೆಂಟ್ ಸಲ್ಲಿಸುವ ಮಧ್ಯ ಲಭ್ಯತೆ ಆಧಾರದ ಮೇಲೆ ನಿಗಮದ ಬ್ಯಾಂಕ್ ಖಾತೆಗೆ ಹಣ ಪಾವತಿಸಬೇಕಿತ್ತು. ಬಳಿಕವಷ್ಟೇ ಮದ್ಯವನ್ನು ನೀಡಲಾಗುತ್ತಿತ್ತು. ಈ ವೇಳೆ ಅಗತ್ಯವಿರುವ ಬ್ರಾಂಡ್ ಮಧ್ಯ ಲಭ್ಯವಾಗುತ್ತಿರಲಿಲ್ಲ ಎಂಬ ದೂರುಗಳು ಇದ್ದವು, ಇದೀಗ ಅಬಕಾರಿ ಇಲಾಖೆ ನಿಯಮಗಳಿಗೆ ತಿದ್ದುಪಡಿ ತಂದು ಡಿಪೋಗಳಲ್ಲಿ ಮಾತ್ರವಲ್ಲದೆ ಸಿಎಲ್ -11 ಸಿಎಲ್ -2 ಚಿಲ್ಲರೆ ಮದ್ಯ ಮಾರಾಟ ಮಳಿಗೆ ಸಿಎಲ್ – 11 ಸಿ ಎಂ ಎಸ್ ಐ ಎಲ್ ಮಳಿಗೆಗಳಲ್ಲೂ ಸಿಎಲ್ -5 ಸನ್ನದು ತೋರಿಸಿ ಮಧ್ಯ ಖರೀದಿ ಮಾಡಬಹುದು, ಸಿಎಲ್ -5 ಸನ್ನದು ದಾರರಿಗೆ ಅಗತ್ಯವಿರುವ ಯಾವುದೇ ರೀತಿಯ ಮದ್ಯವನ್ನು ಸೂಕ್ತ ಬಿಲ್ಲುಗಳ ನಿರ್ವಹಣೆಯೊಂದಿಗೆ ನೀಡಲು ಅವಕಾಶ ನೀಡಲಾಗಿದೆ.

ಏನಿದು ಸಿಎಲ್ – 5 ಸನ್ನದು?: ಮದುವೆ, ಹುಟ್ಟುಹಬ್ಬ, ಆಚರಣೆ, ಬೀಗರೂಟ ಮತ್ತಿತರ ವಯಕ್ತಿಕ ಕಾರ್ಯಕ್ರಮಗಳಲ್ಲಿ ಮದ್ಯ  ಬಳಕೆಗೆ ತಾತ್ಕಾಲಿಕ ಸನ್ನದು ಪಡೆಯುವುದು ಕಡ್ಡಾಯ, ಸನ್ನದು ಅಥವಾ ಪರವಾನಗಿ ಪಡೆಯದೆ ಮದ್ಯ  ಬಳಕೆ ಮಾಡಿದರೆ  ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಸ್ಥಳೀಯ ಪೊಲೀಸ್ ಠಾಣೆಯಿಂದ ಎನ್ಒಸಿ ಪಡೆದು ಜಿಲ್ಲಾ ಅಬಕಾರಿ ಆಯುಕ್ತರ ಬಳಿ 10 ಸಾವಿರ ರೂ. ಶುಲ್ಕ ಪಾವತಿಸಿದರೆ ಒಂದು ದಿನದ ಮಟ್ಟಿಗೆ ಸಿಎಲ್ – 5 ಸನ್ನದು ದೊರೆಯಲಿದೆ.

ಮದ್ಯ ಪ್ರಿಯರಿಗೆ ಶಾಕ್: ಮಂಗಳವಾರ ದಿಂದ 3 ದಿನ ಬೆಂಗಳೂರಲ್ಲಿ ಸಿಗಲ್ಲ ಎಣ್ಣೆ ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಮಂಗಳವಾರ ದಿಂದ 3 ದಿನ ಬೆಂಗಳೂರಿನಲ್ಲಿ ಕೆಎಸ್ ಬಿಎಲ್ ನಿಂದ ಮದ್ಯ ಖರೀದಿಸದಿರಲು ಮದ್ಯದಂಗಡಿ ಮಾಲೀಕರು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಮದ್ಯ ಖರೀದಿ ಮಾಡದಿರಲು ನಿರ್ಧಾರ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು