5:41 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಗು ಅದಲು-ಬದಲು ಪ್ರಕರಣ ಸುಖಾಂತ್ಯ: ದೂರುದಾರರೇ ಮಗುವಿನ ತಂದೆ ಎಂದ ಡಿಎನ್ ಎ ಪರೀಕ್ಷಾ ವರದಿ

18/03/2022, 16:19

ಮಂಗಳೂರು(reporterkarnataka.com): ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 

ನಡೆದಿದೆ ಎನ್ನಲಾದ ಮಗು ಅದಲು -ಬದಲು ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಹೈದರಾಬಾದ್‌ನ ‍ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಮಗು ಮತ್ತು ಮಗುವಿನ ತಂದೆಯ ಡಿಎನ್‌ಎ ಪರೀಕ್ಷೆಯ ವರದಿಯಲ್ಲಿ ಮಗು ದೂರುದಾರರದ್ದೇ ಎನ್ನುವುದು ಖಚಿತವಾಗಿದೆ.

ತನಗೆ ಜನಿಸಿದ ಆರೋಗ್ಯವಂತ ಹೆಣ್ಣು ಮಗುವನ್ನು ಬದಲಿಸಿ, ಆಸ್ಪತ್ರೆಯ ಸಿಬ್ಬಂದಿ ಅನಾರೋಗ್ಯ ಪೀಡಿತ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮಗುವಿನ ತಂದೆ ಮುಸ್ತಾಫಾ ಅವರು ಮಂಗಳೂರು ಉತ್ತರ ಠಾಣೆಗೆ ದೂರು ನೀಡಿದ್ದರು. ಈ ಕುರಿತು ನ್ಯಾಯಾಲಯವು ಮಗು ಮತ್ತು ಹೆತ್ತವರ ಡಿಎನ್ ಎ ಪರೀಕ್ಷೆಗೆ ಒಪ್ಪಿಗೆ ನೀಡಿತ್ತು. ಡಿಎನ್ ಎ ಪರೀಕ್ಷೆ ನಡೆದ ಬಳಿಕ ಸ್ಯಾಂಪಲನ್ನು ಹೈದರಾಬಾದ್ ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿ ತನಿಖಾಧಿಕಾರಿಯ ಕೈ ಸೇರಿದ್ದು, ಮಗು ದೂರು ನೀಡಿದ ಮುಸ್ತಾಫ ಅವರದ್ದೇ ಎಂದು ಸಾಬೀತಾಗಿದೆ.ಈ ವರದಿಯ ಆಧಾರದಲ್ಲಿ ಪ್ರಕರಣದ ಬಗ್ಗೆ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮುಸ್ತಫಾ ಅವರ ಪತ್ನಿ 2021ರ ಸೆಪ್ಟೆಂಬರ್‌ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಆಸ್ಪತ್ರೆಯ ಸಿಬ್ಬಂದಿಯ ಅಚಾತುರ್ಯದಿಂದ

ಜನ್ಮ ದಾಖಲೆ ಪತ್ರದ ಲಿಂಗ ಕಾಲಂನಲ್ಲಿ ’ಗಂಡು ಮಗು’ ಬದಲು ’ಹೆಣ್ಣು ಮಗು’ ಎಂಬುದಾಗಿ ದಾಖಲಿಸಲಾಗಿತ್ತು. ಮಗುವಿನ ತೂಕ ಕೇವಲ 1.4 ಕೆ.ಜಿ. ಯಷ್ಟಿತ್ತು. ಅಲ್ಲದೆ, ಮಗುವಿನಲ್ಲಿ ಉಸಿರಾಟದ ತೊಂದರೆಯೂ ಕಾಣಿಸಿದ್ದರಿಂದ ಕೂಡಲೇ ಅದನ್ನು ನವಜಾತ ಶಿಶುಗಳ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ದಾಖಲೆಯಲ್ಲಿ ಹೆಣ್ಣು ಮಗು ಇದ್ದು, ಕೈಗೆ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮುಸ್ತಫಾ ಅವರು ಆಸ್ಪತ್ರೆಯ ವಿರುದ್ದ ಉತ್ತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಮುಸ್ತಫಾ ಅವರ ದೂರಿನ ಆಧಾರದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ನ್ಯಾಯಾಲಯವೂ ಒಪ್ಪಿಗೆ ಸೂಚಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು