5:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಗು ಅದಲು-ಬದಲು ಪ್ರಕರಣ ಸುಖಾಂತ್ಯ: ದೂರುದಾರರೇ ಮಗುವಿನ ತಂದೆ ಎಂದ ಡಿಎನ್ ಎ ಪರೀಕ್ಷಾ ವರದಿ

18/03/2022, 16:19

ಮಂಗಳೂರು(reporterkarnataka.com): ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ 

ನಡೆದಿದೆ ಎನ್ನಲಾದ ಮಗು ಅದಲು -ಬದಲು ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಹೈದರಾಬಾದ್‌ನ ‍ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಮಗು ಮತ್ತು ಮಗುವಿನ ತಂದೆಯ ಡಿಎನ್‌ಎ ಪರೀಕ್ಷೆಯ ವರದಿಯಲ್ಲಿ ಮಗು ದೂರುದಾರರದ್ದೇ ಎನ್ನುವುದು ಖಚಿತವಾಗಿದೆ.

ತನಗೆ ಜನಿಸಿದ ಆರೋಗ್ಯವಂತ ಹೆಣ್ಣು ಮಗುವನ್ನು ಬದಲಿಸಿ, ಆಸ್ಪತ್ರೆಯ ಸಿಬ್ಬಂದಿ ಅನಾರೋಗ್ಯ ಪೀಡಿತ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮಗುವಿನ ತಂದೆ ಮುಸ್ತಾಫಾ ಅವರು ಮಂಗಳೂರು ಉತ್ತರ ಠಾಣೆಗೆ ದೂರು ನೀಡಿದ್ದರು. ಈ ಕುರಿತು ನ್ಯಾಯಾಲಯವು ಮಗು ಮತ್ತು ಹೆತ್ತವರ ಡಿಎನ್ ಎ ಪರೀಕ್ಷೆಗೆ ಒಪ್ಪಿಗೆ ನೀಡಿತ್ತು. ಡಿಎನ್ ಎ ಪರೀಕ್ಷೆ ನಡೆದ ಬಳಿಕ ಸ್ಯಾಂಪಲನ್ನು ಹೈದರಾಬಾದ್ ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ವರದಿ ತನಿಖಾಧಿಕಾರಿಯ ಕೈ ಸೇರಿದ್ದು, ಮಗು ದೂರು ನೀಡಿದ ಮುಸ್ತಾಫ ಅವರದ್ದೇ ಎಂದು ಸಾಬೀತಾಗಿದೆ.ಈ ವರದಿಯ ಆಧಾರದಲ್ಲಿ ಪ್ರಕರಣದ ಬಗ್ಗೆ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಮುಸ್ತಫಾ ಅವರ ಪತ್ನಿ 2021ರ ಸೆಪ್ಟೆಂಬರ್‌ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಆಸ್ಪತ್ರೆಯ ಸಿಬ್ಬಂದಿಯ ಅಚಾತುರ್ಯದಿಂದ

ಜನ್ಮ ದಾಖಲೆ ಪತ್ರದ ಲಿಂಗ ಕಾಲಂನಲ್ಲಿ ’ಗಂಡು ಮಗು’ ಬದಲು ’ಹೆಣ್ಣು ಮಗು’ ಎಂಬುದಾಗಿ ದಾಖಲಿಸಲಾಗಿತ್ತು. ಮಗುವಿನ ತೂಕ ಕೇವಲ 1.4 ಕೆ.ಜಿ. ಯಷ್ಟಿತ್ತು. ಅಲ್ಲದೆ, ಮಗುವಿನಲ್ಲಿ ಉಸಿರಾಟದ ತೊಂದರೆಯೂ ಕಾಣಿಸಿದ್ದರಿಂದ ಕೂಡಲೇ ಅದನ್ನು ನವಜಾತ ಶಿಶುಗಳ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ದಾಖಲೆಯಲ್ಲಿ ಹೆಣ್ಣು ಮಗು ಇದ್ದು, ಕೈಗೆ ಗಂಡು ಮಗುವನ್ನು ನೀಡಿದ್ದಾರೆ ಎಂದು ಆರೋಪಿಸಿ ಮುಸ್ತಫಾ ಅವರು ಆಸ್ಪತ್ರೆಯ ವಿರುದ್ದ ಉತ್ತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಮುಸ್ತಫಾ ಅವರ ದೂರಿನ ಆಧಾರದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ನ್ಯಾಯಾಲಯವೂ ಒಪ್ಪಿಗೆ ಸೂಚಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು