1:39 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಾಗುಂಡಿ ಹೊಸ ಸೇತುವೆ ದನಗಳ್ಳರಿಗೆ ವರದಾನವಾಯಿತೇ?: ಗೋವುಗಳ ತಲೆ, ಕಾಲುಗಳು ಪತ್ತೆ

28/05/2023, 13:35

ಚಿಕ್ಕಮಗಳೂರು(reporterkarnataka.com): ಎರಡು ಗೋವುಗಳ ತಲೆ, ಎಂಟು ಕಾಲು ಹಾಗೂ ಮೂಳೆಗಳು ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿ ಪತ್ತೆಯಾಗಿರೋ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.

ಪ್ರತಿ ಮಳೆಗಾಲದಲ್ಲೂ ಮಾಗುಂಡಿ ಸಮೀಪದ ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗುತ್ತಿತ್ತು. ಯಾವ ಮಟ್ಟಕ್ಕೆ ಅಂದ್ರೆ ದಿನಕ್ಕೆ ಐದಾರು ಬಾರಿ ಗಂಟೆಗಟ್ಟಲೇ ಸೇತುವೆ ಮೇಲೆ ಐದಾರು ಅಡಿ ನೀರು ಹರಿಯುತ್ತಿತ್ತು. ಬಾಳೆಹೊನ್ನೂರು-ಕಳಸ ಮುಖ್ಯ ಮಾರ್ಗದ ಈ ರಸ್ತೆಯಲ್ಲಿ ಗಂಟೆಗಟ್ಟಲೇ ವಾಹನ ಸಂಚಾರ ಕೂಡ ಜಾಮ್ ಆಗುತ್ತಿತ್ತು. ಹಾಗಾಗಿ, ಸ್ಥಳಿಯರ ಹಲವು ವರ್ಷಗಳ ಬೇಡಿಕೆಯಂತೆ ಈ ಬಾರಿ ಈ ಮಹಲ್ಗೋಡು ಗ್ರಾಮಕ್ಕೆ ಹೊಸ ಸೇತುವೆ ನಿರ್ಮಾಣವಾಗಿದೆ. ಊರಿನಿಂದ ಸ್ವಲ್ಪ ದೂರದಲ್ಲಿ ಇರುವ ಈ ಸೇತುವೆ ದನಗಳ್ಳರಿಗೆ ವರದಾನವಾದಂತೆ ಕಾಣುತ್ತಿದೆ. ಏಕೆಂದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ದನಗಳ್ಳರ ಹಾವಳಿ ಹೊಸತೇನಲ್ಲ. ದಶಕಗಳಿಂದ ನೂರಾರು ರಾಸುಗಳು ದನಗಳ್ಳರ ಪಾಲಾಗಿವೆ. ಕಾರುಗಳಲ್ಲಿ ದನಗಳನ್ನ ಸಾಗಿಸೋದು ಕಷ್ಟ. ಗೋಮಾಂಸವನ್ನ ಸಾಗಿಸೋದು ಸುಲಭ. ಹಾಗಾಗಿ, ಸ್ವಲ್ಪ ಎತ್ತರದಲ್ಲಿ ನಿರ್ಮಾಣವಾಗಿರೋ ಸೇತುವೆ ದನಗಳ್ಳರ ಪಾಲಿಗೆ ವರವಾದಂತೆ ಕಾಣುತ್ತಿದೆ. ರಾತ್ರಿ ವೇಳೆಯಲ್ಲಿ ಜನಸಾಮಾನ್ಯರ ಓಡಾಟ ಕಡಿಮೆ ಇರುವ ಈ ಸೇತುವೆ ಕೆಳಭಾಗದಲ್ಲಿ ಸಮೃದ್ಧ ಜಾಗವಿರೋದ್ರಿಂದ ದನಗಳ್ಳರು ಅದೇ ಸೇತುವೆ ಕೆಳಗೆ ದನಗಳನ್ನ ಕಡಿದು ತಲೆ-ಕಾಲುಗಳನ್ನ ಅಲ್ಲೇ ಬಿಟ್ಟು ಮಾಂಸವನ್ನ ಕೊಂಡೊಯ್ದಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ, ಕಳೆದ ಎರಡು ದಿನದ ಹಿಂದೆ ಮೂಡಿಗೆರೆ ತಾಲೂಕಿನ ರಾಸುವೊಂದು ಕಳ್ಳತನವಾಗಿತ್ತು. ಈ ರಾಸು ಅದೇ ಇರಬಹುದಾ ಎಂದು ಸ್ಥಳಿಯರು ಅಂದಾಜು ಕೂಡ ಮಾಡಿದ್ದಾರೆ. ಆದರೆ, ಮಲೆನಾಡಲ್ಲಿ ಆಗಿಂದಾಗ್ಗೆ ಮೇಲಿಂದ ಮೇಲೆ ರಾಸುಗಳ ಮೂಲಕವೇ ಜೀವನ ಕಟ್ಟಿಕೊಂಡವರ ರಾಸುಗಳು ಕೂಡ ಕಳ್ಳತನವಾಗುತ್ತಿವೆ. ಹಾಗಾಗಿ, ಮಲೆನಾಡಿಗರು ಈ ಗೋಕಳ್ಳರ ಹಾವಳಿಗೆ ಎಂದು ಬ್ರೇಕ್ ಬೀಳುವುದೋ ಎಂದು ಗೋಕಳ್ಳರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು