11:29 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಹಾಕುಂಭಮೇಳ: ಅ.13ರಂದು ಕೆ.ಆರ್.ಪೇಟೆಯಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ, ಜಿಲ್ಲಾ ಜನಪದ ಉತ್ಸವ

07/10/2022, 23:23

ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ

info.reporterkarnataka @gmail.com

ಮಂಡ್ಯ(reporter Karnataka com): ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಜನಪದ ಉತ್ಸವ ಕಾರ್ಯಕ್ರಮ ನಡೆಯಲಿದೆ.

ಜನಪದ ಉತ್ಸವದಲ್ಲಿ 3 ಸಾವಿರ ಕಲಾವಿದರು ಹಾಗೂ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗೃತಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ತಿಳಿಸಿದರು.

ಅವರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಳ್ವಾಸ್ ನುಡಿಸಿರಿ ವ್ಯವಸ್ಥಾಪಕ ಸಿಬ್ಬಂದಿಗಳು, ಪಟ್ಟಣದ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು.
ಅಕ್ಟೋಬರ್13ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಿಂದ ಆರಂಭವಾಗುವ ಮಹದೇಶ್ವರರ ಜ್ಯೋತಿ ರಥ ಯಾತ್ರೆಯಲ್ಲಿ 100 ಜಾನಪದ ಕಲಾತಂಡಗಳ 3 ಸಾವಿರ ಕಲಾವಿದರು, 5 ಸಾವಿರ ಕಾಲೇಜು ವಿದ್ಯಾರ್ಥಿಗಳು ವೇಷಭೂಷಣಗಳನ್ನು ತೊಟ್ಟು ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈವಿಧ್ಯಮಯವಾದ ಮೆರವಣಿಗೆ ನಡೆಸಿ ಪುರಸಭಾ ಕಾರ್ಯಾಲಯದ ಪಕ್ಕದಲ್ಲಿರುವ ಬೃಹತ್ ಮೈದಾನವನ್ನು ತಲುಪಲಿದ್ದಾರೆ. ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಪ್ರಸಂಗಗಳ ಪ್ರದರ್ಶನವು ನಡೆಯಲಿದ್ದು ಕೆ.ಆರ್.ಪೇಟೆ ಪಟ್ಟಣದಲ್ಲಿ ಹಬ್ಬದ ವಾತಾವರಣವು ನಿರ್ಮಾಣವಾಗಲಿದೆ. ಮಹದೇಶ್ವರ ಜ್ಯೋತಿ ರಥಯಾತ್ರೆಯು ಹಾದು ಹೋಗುವ ಮಾರ್ಗದುದ್ದಕ್ಕೂ ರಂಗೋಲಿಗಳನ್ನು ಹಾಕಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗುವುದು. ಕೆ.ಆರ್.ಪೇಟೆ ಪಟ್ಟಣದ ಜನತೆ ಜಿಲ್ಲಾ ಮಟ್ಟದ ಜನಪದ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಕುಂಭಮೇಳದ ಯಶಸ್ಸಿಗೆ ಕೈಜೋಡಿಸಬೇಕು. ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಕನಿಷ್ಠ 6 ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು ಭಕ್ತಾದಿಗಳ 4 ದಿನಗಳ ಕಾಲ ನಡೆಯಲಿರುವ ಮಹಾದಾಸೋಹಕ್ಕೆ ಅಕ್ಕಿ, ಬೇಳೆ, ಬೆಲ್ಲ, ತೆಂಗಿನಕಾಯಿ, ರೀಫೈಂಡ್ ಆಯಲ್, ನಂದಿನಿ ತುಪ್ಪ ಸೇರಿದಂತೆ ಅವಶ್ಯಕ ವಸ್ತುಗಳನ್ನು ಉದಾರವಾಗಿ ದಾನ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಮನವಿ ಮಾಡಿದರು.
ಸಮಾಲೋಚನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ತಹಶೀಲ್ದಾರ್ ಎಂ.ವಿ.ರೂಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪುರಸಭೆ ಮುಖ್ಯಾಧಿಕಾರಿ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಕಲಾತಂಡಗಳ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು