12:03 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಮಸಿ: ಗಡಿ ಭಾಗ ಅಥಣಿಯಲ್ಲಿ ವಿನೂತನ ಪ್ರತಿಭಟನೆ

28/11/2022, 20:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ಕಲ್ಲು ಹೊಡೆದ ಮರಾಠಿ ಪುಂಡರ ಕೃತ್ಯ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಕರವೇ ಪ್ರವೀಣ ಶೆಟ್ಟಿ ಬಣದಿಂದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಚಾಲಕ ನಿರ್ವಾಹಕರಿಗೆ ಹಾರ ಹಾಕಿ ಕನ್ನಡ ಶಲ್ಯೆ ಕೊಟ್ಟು ಧ್ವಜವನ್ನು ಹಿಡಿಸಿ ಗುಲಾಬಿ ನೀಡುವ ಮೂಲಕ ಮಹಾರಾಷ್ಟ್ರ ಸಾರಿಗೆ ಸಿಬ್ಬಂದಿಗಳನ್ನು ಸನ್ಮಾನಿಸಿದರು.

ಅಥಣಿ ಪಟ್ಟಣದ ಹಲ್ಯಾಳ ಸರ್ಕಲ್ ಮತ್ತು ಅಂಬೇಡ್ಕರ್ ವೃತ್ತದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ ತಡೆದ ಕರವೇ ಸದಸ್ಯರು ಮಹಾರಾಷ್ಟ್ರ ಸಿ ಎಮ್ ಎಕನಾಥ ಶಿಂಧೆ ಮತ್ತು ಎಮ್ ಇ ಎಸ್ ಹಾಗೂ ಶಿವಸೇನೆ ಪುಂಡರ ವಿರುದ್ದ ಧಿಕ್ಕಾರ ಕೂಗಿದರಲ್ಲದೆ ಜತ್ ಸೋಲಾಪುರ ಅಕ್ಕಲಕೋಟ ಲಾಥೂರ ಗಳನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ಗಡಿ ಕ್ಯಾತೆ ತೆಗೆಯುವ ಮಹಾ ಪುಂಡರಿಗೆ ತಕ್ಕ ಪಾಠ ಕಲಿಸಲು ಕರ್ನಾಟಕದಲ್ಲಿ ಎಮ್ ಇ ಎಸ್ ಮತ್ತು ಶಿವಸೇನೆಯನ್ನು ನಿಷೇಧಿಸಬೇಕು. ಅಲ್ಲಿನ ಕನ್ನಡಿಗರ ಮೇಲೆ ಹಲ್ಲೆ ಮತ್ತು ಅವಮಾನ ಮಾಡಲಾಗುತ್ತಿದ್ದು ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಸಾಹಿತಿ ದೀಪಕ ಶಿಂಧೇ ಮಾತನಾಡಿ, ಮಹಾರಾಷ್ಟ್ರದ ಜತ್,ಅಕ್ಕಲಕೋಟ,ಸೊಲ್ಲಾಪುರ, ಕೊಲ್ಲಾಪೂರ ಜಿಲ್ಲೆಗಳಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಿರುವ ಹಳ್ಳಿಗಳನ್ನು ಕಡೆಗಣಿಸಲಾಗುತ್ತಿದ್ದು ಅಭಿವೃದ್ಧಿ ಮಾಡದೆ ಇದ್ದರೆ ಕರ್ನಾಟಕ ಯಾವುದೇ ಕಾರಣಕ್ಕೂ ಕರ್ನಾಟಕದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವದಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು