6:07 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ

24/08/2021, 18:50

ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದಾರೆ. ನಾಸಿಕ್ ನಲ್ಲಿ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಘೋಷಣೆ ಕೂಗಿದ ಶಿವಸೇನಾ ಕಾರ್ಯಕರ್ತರು, ನಾಸಿಕ್​ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಕಚೇರಿಗೆ ಹಾನಿಯುಂಟು ಮಾಡಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮುಂಬೈ, ರತ್ನಗಿರಿಯಲ್ಲಿಯೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮುಂಬೈನಲ್ಲಿರುವ ಸಚಿವ ನಾರಾಯಣ ರಾಣೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಶಿವಸೇನೆ-ಬಿಜೆಪಿ ನಡುವೆ ಘರ್ಷಣೆ ರತ್ನಗಿರಿಯಲ್ಲೂ ಶಿವಸೇನಾ ಕಾರ್ಯಕರ್ತರು ಕೇಂದ್ರ ಸಚಿವ ವಿರುದ್ಧ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಹಾಗೂ ನಾರಾಯಣ ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾಣೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶಿವಸೇನಾ ಸಂಸದ ವಿನಾಯಕ್ ರಾವತ್, ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರ ಕ್ಯಾಬಿನೆಟ್​​ನಿಂದ ರಾಣೆಯನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು