6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

24/08/2021, 17:38

ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಣೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ 4 ಪ್ರಕರಣ ದಾಖಲಿಸಲಾಗಿದೆ. ಪುಣೆ ಹಾಗೂ ನಾಸಿಕ್ ನಲ್ಲಿ ತಲಾ ಒಂದು ಪ್ರಕರಣ ಹಾಗೂ ರಾಯಗಢ ಜಿಲ್ಲೆಯಲ್ಲಿ ಎರಡು ಪ್ರಕರಣಗಳು

ದಾಖಲಾಗಿದೆ.

ನಾರಾಯಣ ರಾಣೆ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, ರಾಣೆ ಅವರು ಮುಖ್ಯಮಂತ್ರಿ ಬಗ್ಗೆ ಮಾತನಾಡುವಾಗ ಸಂಯಮ ತೋರಿಸಬೇಕಿತ್ತು ಎಂದಿದ್ದಾರೆ.

ಈ ನಡುವೆ ರಾಣೆ ಅವರು ತನ್ನ ವಿರುದ್ಧ ಎಫ್ ಐಆರ್ ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಅಥವಾ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡುವಂತೆ ಮಧ್ಯಂತರ ಆದೇಶ ಕೋರಿದ್ದಾರೆ.

ನಾರಾಯಣ ರಾಣೆ ಈ ಹಿಂದೆ ಶಿವಸೇನೆಯಲ್ಲಿದ್ದು, ಮುಖ್ಯಮಂತ್ರಿಯಾಗಿದ್ದರು. ನಂತರ ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು. ನಂತರ ಬಿಜೆಪಿ ಸೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು