9:15 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

07/10/2025, 16:39

ಬೆಂಗಳೂರು(reporterkarnataka.com): ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

*ಸಚಿವ ಸಂಪುಟ ಪುನರ್ ರಚನೆ:* ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

*ಮನುವಾದಿಗಳ ಕೈವಾಡ:*
ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

*ಸಮೀಕ್ಷೆ ಅವಧಿ ವಿಸ್ತರಣೆ- ಪರಿಶೀಲಿಸಿ ತೀರ್ಮಾನ:*
ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು