10:01 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

Mahaveera Jayanthi | ಭಗವಾನ್ ಮಹಾವೀರರ ಸಂದೇಶ ವಿಶ್ವಕ್ಕೆ ಇಂದು ಪ್ರಸ್ತುತ : ಸ್ಪೀಕರ್ ಖಾದರ್

11/04/2025, 11:04

ಮಂಗಳೂರು(reporterkarnataka.com): ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಮಹಾವೀರರು ತೋರಿಸಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜೈನ್ ಸೊಸೈಟಿ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಕುಮಾರ್, ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಜೈನ್ ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ವಂದಿಸಿದರು. ಸುಕುಮಾರ ಬಲ್ಲಾಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು