5:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Mahaveera Jayanthi | ಭಗವಾನ್ ಮಹಾವೀರರ ಸಂದೇಶ ವಿಶ್ವಕ್ಕೆ ಇಂದು ಪ್ರಸ್ತುತ : ಸ್ಪೀಕರ್ ಖಾದರ್

11/04/2025, 11:04

ಮಂಗಳೂರು(reporterkarnataka.com): ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಮಹಾವೀರರು ತೋರಿಸಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜೈನ್ ಸೊಸೈಟಿ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಕುಮಾರ್, ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಜೈನ್ ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ವಂದಿಸಿದರು. ಸುಕುಮಾರ ಬಲ್ಲಾಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು